Skip to main content

Posts

Showing posts from July, 2019

ಎರಡನೇಬಾರಿಯ ಕೇದಾರಕಾಂತ ಶಿಖರಾರೋಹಣದ ಅನುಭವಗಳು

ಎರಡನೇಬಾರಿಯ ಕೇದಾರಕಾಂತ ಶಿಖರಾರೋಹಣದ ಅನುಭವಗಳು ಫೆಬ್ರವರಿ ತಿಂಗಳಿನಲ್ಲಿ ಬಿ.ವಿ.ರಮೇಶ್ ಹಾಗೂ ವೆಂಕಣ್ಣ ಆಚಾರ್ಯ ರವರೊಂದಿಗೆ ಪಶ್ಹಿಮ ಬಂಗಾಳದಲ್ಲಿನ ಸಂಡಕ್ಫೂ ಶಿಖರಾರೋಹಣ ಮಾಡುವ ಮೊದಲೇ ನನ್ನ ಗುಜರಾತ್ ರಾಜ್ಯದಲ್ಲಿನ ಕಛ್ ಪ್ರವಾಸದಲ್ಲಿ ಜಯಂತ್ ರವರಿಗೆ ಮಾತು ಕೊಟ್ಟಂತೆ ಏಪ್ರಿಲ್ ತಿಂಗಳಿನಲ್ಲಿ ಕೇದಾರ್ಕಾಂತ ಶಿಖರಾರೋಹಣ ಮಾಡಲು ತೀರ್ಮಾನಿಸಿ ಅದರಂತೆ ಜನವರಿ ತಿಂಗಳಿನಲ್ಲೇ ಇಂಡಿಯಾ ಹೈಕ್ ರವರಲ್ಲಿ ನನಗೆ ಹಾಗೂ ಶ್ರೀಕಾಂತ್ ಕೊಲ್ಹಾರ ರಿಗೆ ಸ್ಥಳವನ್ನು ಕಾಯ್ದಿರಿಸಿದ್ದೆ. ಹಾಗೂ ಜಯಂತ್ ರವರೂ ಕೂಡ ತಮ್ಮ ಸ್ಥಳವನ್ನು ಕಾದಿರಿಸಿದ್ದರು. ಅದರಂತೆ ನಾನು ಹಾಗೂ ಶ್ರೀಕಾಂತ್ ಮೊದಲೇ ಪ್ರಯಾಣಕ್ಕೆ ಸಂಬಂದಿಸಿದಂತೆ ರೈಲಿನಲ್ಲಿ ಟಿಕೆಟ್ ನ್ನು ಬುಕ್ ಮಾಡಿದ್ದೆವು. ಸ್ವಲ್ಪ ದಿನದ ನಂತರ ನಾವಿಬ್ಬರೂ ಏಪ್ರಿಲ್ ನಲ್ಲೇ ಅಮೆರಿಕ ಪ್ರಯಾಣಮಾಡಬೇಕಾದ ಸಂದರ್ಭ ಬಂದಿದ್ದರಿಂದ ನವದೆಹಲಿಗೆ ರೈಲಿನಲ್ಲಿ ಹೋಗುವ ಬದಲು ವಿಮಾನದಲ್ಲಿ ಪ್ರಯಾಣಿಸಲು ತೀರ್ಮಾನಿಸಿ ಅದರಂತೆ ಟಿಕೆಟ್ ನ್ನು ಬುಕ್ ಮಾಡಿದೆವು. ಅನಂತರ ಫೆಬ್ರವರಿ ತಿಂಗಳಿನಲ್ಲಿ ನನ್ನ ತಮ್ಮ ಅನಂತಮೂರ್ತಿಯ ಮನೆಗೆ ಹೋಗಿದ್ದಾಗ ಈ ವಿಷಯವನ್ನು ತಿಳಿಸಿದಾಗ ಅವನೂ ತಾನು ಹಾಗೂ ಉಮಾ ಸಹ ನಮ್ಮ ಜೊತೆಗೆ ಬರಲು ತೀರ್ಮಾನಿಸಿದರು. ಅದರಂತೆ ಅವರಿಗೂ ಇಂಡಿಯಾ ಹೈಕ್ ನಲ್ಲಿ ಮತ್ತೆರಡು ಸ್ಥಳಗಳನ್ನು ಬುಕ್ ಮಾಡಿ ಡೆಹರಾಡೂನಿಗೆ ಹೋಗಿಬರುವ ಪ್ರಯಾಣವನ್ನು ಬುಕ್ ಮಾಡಿದೆವು. ಅನಂತರ ಮೂರ್ತಿ ಹಾಗೂ ಉಮ